ಶ್ರೀ ದತ್ತಾತ್ರೇಯ ರಾಮಚಂದ್ರ ಬೇಂದ್ರೆ"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪರಿವಿಡಿ [ಅಡಗಿಸು]
೧ ಜೀವನ
೨ ಸಾಹಿತ್ಯ
೩ ಬೇಂದ್ರೆಯವರ ಸಾಹಿತ್ಯ
೩.೧ ಕಾವ್ಯಸಂಕಲನ
೩.೨ ವಿಮರ್ಶೆ
೩.೩ ಸಣ್ಣ ಕಥೆ
೩.೪ ನಾಟಕಗಳು
೩.೫ ಅನುವಾದ
೩.೬ ಮರಾಠಿ ಕೃತಿಗಳು
೩.೭ ಇಂಗ್ಲಿಷ ಕೃತ
೪ ಗೌರವ ಪ್ರಶಸ್ತಿಗಳು
೫ ಬಾಹ್ಯ ಸಂಪರ್ಕಗಳು
[ಬದಲಾಯಿಸಿ] ಜೀವನ
ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ. ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ.
ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯವರು. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಮ್.ಎ. ಮಾಡಿಕೊಂಡು ಕೆಲಕಾಲ (೧೯೪೪ - ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು.
ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ "ಕೃಷ್ಣ ಕುಮಾರಿ"-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.
ಕವಿ, ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ. ೧೯೮೧ರ ಅಕ್ಟೋಬರ್ನಲ್ಲಿ ತೀರಿಕೊಂಡ ಅವರು ಕವಿಗಳಿಗೆ, ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು.
[ಬದಲಾಯಿಸಿ] ಸಾಹಿತ್ಯ
ಬೇಂದ್ರೆ ಸ್ಮಾರಕ, ಧಾರವಾಡಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ "ಪ್ರಭಾತ" ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬ೦ದರು. "ಗರಿ", "ಕಾಮಕಸ್ತೂರಿ", "ಸೂರ್ಯಪಾನ", "ನಾದಲೀಲೆ", "ನಾಕುತಂತಿ" ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸ್ವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ "ಗೆಳೆಯರ ಗುಂಪು" ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು. ಆಗಿನ್ನೂ ಸ್ವಾತಂತ್ರ್ಯ ಚಳುವಳಿ ಬಿಸಿ ಮುಟ್ಟಿದ್ದ ಸಮಯ. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು.
ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು.
ಆಧ್ಯಾತ್ಮದ ವಿಷಯದಲ್ಲಿ ಅವರು ಒಲವು ಬೆಳೆಸಿಕೊಂಡಿದ್ದರು. ಅರವಿಂದರ ವಿಚಾರಗಳಲ್ಲಿ ಆಸಕ್ತಿ ತೋರಿದ ಅವರು ಅರವಿಂದರ ಕೃತಿಯನ್ನು ಇಂಗ್ಲೀಷಿನಿಂದ ಭಾಷಾಂತರ ಮಾಡಿಕೊಟ್ಟರು. ಜಾನಪದ ಧಾಟಿಯ ಅವರ ಎಷ್ಟೋ ಕವಿತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಕವಿತೆಗಳ ನಾದಮಾಧುರ್ಯ ಅಪಾರ. ಇವರು ಬರೆದ "ಪಾತರಗಿತ್ತಿ ಪಕ್ಕ ನೋಡಿದೇನ ಅಕ್ಕ" ಇಂದಿಗೂ ಚಿಣ್ಣರ ಅತ್ಯಂತ ಪ್ರೀತಿಪಾತ್ರ ಕವನವಾಗಿದೆ
[ಬದಲಾಯಿಸಿ] ಬೇಂದ್ರೆಯವರ ಸಾಹಿತ್ಯ
[ಬದಲಾಯಿಸಿ] ಕಾವ್ಯಸಂಕಲನ
(ಪ್ರಥಮ ಆವೃತ್ತಿಯ ವರ್ಷದೊಂದಿಗೆ) ಅಂಬಿಕಾತನಯದತ್ತರ ಸಮಗ್ರ ಕಾವ್ಯ ೬ ಸಂಪುಟಗಳು
೧೯೨೨: ಕೃಷ್ಣಾಕುಮಾರಿ;
೧೯೩೨: ಗರಿ;
೧೯೩೪: ಮೂರ್ತಿ ಮತ್ತು ಕಾಮಕಸ್ತೂರಿ;
೧೯೩೭: ಸಖೀಗೀತ;
೧೯೩೮: ಉಯ್ಯಾಲೆ;
೧೯೩೮: ನಾದಲೀಲೆ;
೧೯೪೩: ಮೇಘದೂತ;
೧೯೪೬: ಹಾಡು ಪಾಡು;
೧೯೫೧: ಗಂಗಾವತರಣ;
೧೯೫೬: ಸೂರ್ಯಪಾನ;
೧೯೫೬: ಹೃದಯಸಮುದ್ರ;
೧೯೫೬: ಮುಕ್ತಕಂಠ;
೧೯೫೭: ಚೈತ್ಯಾಲಯ;
೧೯೫೭: ಜೀವಲಹರಿ;
೧೯೫೭: ಅರಳು ಮರಳು;
೧೯೫೮: ನಮನ;
೧೯೫೯: ಸಂಚಯ;
೧೯೬೦: ಉತ್ತರಾಯಣ;
೧೯೬೧: ಮುಗಿಲಮಲ್ಲಿಗೆ;
೧೯೬೨: ಯಕ್ಷ ಯಕ್ಷಿ;
೧೯೬೪: ನಾಕುತಂತಿ;
೧೯೬೬: ಮರ್ಯಾದೆ;
೧೯೬೮: ಶ್ರೀಮಾತಾ;
೧೯೬೯: ಬಾ ಹತ್ತರ;
೧೯೭೦: ಇದು ನಭೋವಾಣಿ;
೧೯೭೨: ವಿನಯ;
೧೯೭೩: ಮತ್ತೆ ಶ್ರಾವಣಾ ಬಂತು;
೧೯೭೭: ಒಲವೇ ನಮ್ಮ ಬದುಕು;
೧೯೭೮: ಚತುರೋಕ್ತಿ ಮತ್ತು ಇತರ ಕವಿತೆಗಳು;
೧೯೮೨: ಪರಾಕಿ;
೧೯೮೨: ಕಾವ್ಯವೈಖರಿ;
೧೯೮೩: ತಾ ಲೆಕ್ಕಣಕಿ ತಾ ದೌತಿ;
೧೯೮೩: ಬಾಲಬೋಧೆ;
೧೯೮೬: ಚೈತನ್ಯದ ಪೂಜೆ;
೧೯೮೭: ಪ್ರತಿಬಿಂಬಗಳು;
[ಬದಲಾಯಿಸಿ] ವಿಮರ್ಶೆ
೧೯೩೭: ಸಾಹಿತ್ಯ ಮತ್ತು ವಿಮರ್ಶೆ;
೧೯೪೦: ಸಾಹಿತ್ಯಸಂಶೋಧನೆ;
೧೯೪೫: ವಿಚಾರ ಮಂಜರಿ;
೧೯೫೪: ಕವಿ ಲಕ್ಷ್ಮೀಶನ ಜೈಮಿನಿಭಾರತಕ್ಕೆ ಮುನ್ನುಡಿ;
೧೯೫೯: ಮಹಾರಾಷ್ಟ್ರ ಸಾಹಿತ್ಯ;
೧೯೬೨: ಕಾವ್ಯೋದ್ಯೋಗ;
೧೯೬೮: ಕನ್ನಡ ಸಾಹಿತ್ಯದಲ್ಲಿ ನಾಲ್ಕು ನಾಯಕರತ್ನಗಳು;
೧೯೭೪: ಸಾಹಿತ್ಯದ ವಿರಾಟ್ ಸ್ವರೂಪ;
೧೯೭೬: ಕುಮಾರವ್ಯಾಸ ಪುಸ್ತಿಕೆ;
ವರಕವಿ ದ.ರಾ. ಬೇಂದ್ರೆ ಕುರಿತ ಮತ್ತೊಂದು ಲೇಖನಕ್ಕೆ ಈ ಲಿಂಕ್ ಕ್ಲಿಕ್ ಮಾಡಿ http://kannadaratna.com/achievers/bendre.html
[ಬದಲಾಯಿಸಿ] ಸಣ್ಣ ಕಥೆ
೧೯೪೦: ನಿರಾಭರಣ ಸುಂದರಿ;
[ಬದಲಾಯಿಸಿ] ನಾಟಕಗಳು
ದೆವ್ವದ ಮನೆ;
ಹಳೆಯ ಗೆಣೆಯರು;
ಸಾಯೊ ಆಟ;
ತಿರುಕರ ಪಿಡುಗು;
ಗೋಲ್;
ಉದ್ಧಾರ;
ಜಾತ್ರೆ;
ನಗೆಯ ಹೊಗೆ;
ಮಂದೀ ಮದಿವಿ;
ಮಂದೀ ಮಕ್ಕಳು;
ಮಂದೀ ಮನಿ;
ಆ ಥರಾ ಈ ಥರಾ;
ಶೋಭನಾ;
ಮಕ್ಕಳು ಅಡಿಗೆ ಮನೆ ಹೊಕ್ಕರೆ;
ಸಮಗ್ರ ನಾಟಕ ಸಂಪುಟಗಳು ೩ ಸಂಪುಟಗಳಲ್ಲಿ ನಾಟಕ ಸಿಧ್ಧಾಂತ ಒಳಗೊಂಡು
[ಬದಲಾಯಿಸಿ] ಅನುವಾದ
ಉಪನಿಷತ್ ರಹಸ್ಯ( ಮೂಲ: ಶ್ರೀ ರಾನಡೆ[[೧]]);
ಭಾರತೀಯ ನವಜನ್ಮ(ಮೂಲ:ಶ್ರೀ ಅರವಿಂದ[[೨]] );
ಶ್ರೀ ಅರವಿಂದರ ಯೋಗ, ಆಶ್ರಮ ಮತ್ತು ತತ್ವೊಪದೇಶ;
ಚೀನಾದ ಬಾಳು ಬದುಕು;
ಗುರು ಗೋವಿಂದಸಿಂಗ;
ನೂರೊಂದು ಕವನ( ಮೂಲ: ಶ್ರೀ ರವೀಂದ್ರನಾಥ ಠಾಕೂರ);
ಕಬೀರ ವಚನಾವಲಿ;
ಭಗ್ನಮೂರ್ತಿ(ಮೂಲ ಮರಾಠಿ: ಶ್ರೀ ಅ.ರಾ.ದೇಶಪಾಂಡೆ);
[ಬದಲಾಯಿಸಿ] ಮರಾಠಿ ಕೃತಿಗಳು
ಸಂವಾದ;
ವಿಠ್ಠಲ ಸಂಪ್ರದಾಯ;
ಶಾಂತಲಾ( ಕನ್ನಡದಿಂದ ಅನುವಾದ:ಮೂಲ:ಕೆ.ವಿ.ಅಯ್ಯರ್);
ಸಂತ, ಮಹಂತ,ಪೂರ್ಣ ಶಂಭೂ ವಿಠ್ಠಲ;
ವಿಠ್ಠಲ ಪಾಂಡುರಂಗ (ಕವನ ಸಂಗ್ರಹ);
[ಬದಲಾಯಿಸಿ] ಇಂಗ್ಲಿಷ ಕೃತ
A theory of Immortality of probable problem and possible solution
[ಬದಲಾಯಿಸಿ] ಗೌರವ ಪ್ರಶಸ್ತಿಗಳು
ದ.ರಾ.ಬೇಂದ್ರೆಯವರುಅವರಿಗೆ ಸಂದ ಗೌರವಗಳು ಹಲವು. ಡಾಕ್ಟರೇಟ್ ಪದವಿ, ಕೇಳ್ಕರ್ ಬಹುಮಾನ (೧೯೬೫ರಲ್ಲಿ ಮರಾಠಿಯಲ್ಲಿ ರಚಿಸಿದ "ಸಂವಾದ" ಎಂಬ ಕೃತಿಗೆ), ಅವರ "ಅರಳು ಮರಳು" ಕೃತಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ (೧೯೫೮ರಲ್ಲಿ), ೧೯೪೩ರಲ್ಲಿ ಶಿವಮೊಗ್ಗದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪದವಿ, ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ -ಮೊದಲಾದ ಅನೇಕ ಗೌರವಗಳು ಅವರಿಗೆ ಲಭಿಸಿದವು. ೧೯೬೪ರ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಬೇಂದ್ರೆಯವರನ್ನು ಗೌರವಿಸಲಾಯಿತು. ಅದೇ ವರ್ಷ ಅವರ ನಾಕುತಂತಿ ಕವನ ಸಂಕಲನವು ಪ್ರಕಾಶಿಸಲ್ಪಟ್ಟಿತು.
೧೯೭೩ರಲ್ಲಿ ಬೇಂದ್ರೆಯವರ ನಾಕುತಂತಿ ಕವನ ಸಂಗ್ರಹವನ್ನು ಜ್ಞಾನಪೀಠ ಪ್ರಶಸ್ತಿಗಾಗಿ ಆರಿಸಿತು. ಅದೇ ವರ್ಷ ಒರಿಯಾ ಭಾಷೆಯ ಲೇಖಕ ಗೋಪಿನಾಥ ಮೊಹಂತಿ ಅವರೂ ಈ ಗೌರವಕ್ಕೆ ಅರ್ಹರಾದರು. ಆ ವರ್ಷದ ಪ್ರಶಸ್ತಿ ಮೌಲ್ಯವನ್ನು ಇಬ್ಬರಿಗೂ ಹಂಚಲಾಯಿತು.
Wednesday, July 7, 2010
ಕುವೆಂಪು
ಕುವೆಂಪು - ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (೧೯೦೪ - ೧೯೯೪) - ಕನ್ನಡವು ಪಡೆದ ಅತ್ಯುತ್ತಮ ಕವಿ, 'ರಾಷ್ಟ್ರಕವಿ'. ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದ ಪ್ರಥಮ ವ್ಯಕ್ತಿ. 'ವಿಶ್ವ ಮಾನವ'. ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ.
ಪರಿವಿಡಿ [ಅಡಗಿಸು]
೧ ಜೀವನ
೨ ಸಂದೇಶ
೩ ವಿಶ್ವ ಮಾನವ ಸಂದೇಶ
೪ ' ಸಾಹಿತ್ಯ
೫ ಶ್ರೀ ರಾಮಾಯಣ ದರ್ಶನಂ
೬ ಕೃತಿಗಳು
೬.೧ ಕುವೆಂಪುರವರ ಬಗ್ಗೆ ಇತರರು ಬರೆದ ಪುಸ್ತಕಗಳು
೭ ಪ್ರಶಸ್ತಿ ಪುರಸ್ಕಾರಗಳು
೮ ಇತರೆ ಸಂಬಂಧಪಟ್ಟ ಪುಟಗಳು
೯ ಹೊರಗಿನ ಸಂಪರ್ಕಗಳು
[ಬದಲಾಯಿಸಿ] ಜೀವನ
ಡಿಸೆಂಬರ್ ೨೯, ೧೯೦೪, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆಯಲ್ಲಿ ಜನಿಸಿದ ಇವರು, ಕುಪ್ಪಳ್ಳಿ (ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು) ಹಾಗೂ ಮೈಸೂರಿನಲ್ಲಿ ಬೆಳೆದರು. ಮೈಸೂರಿನ 'ಮಹಾರಾಜಾ' ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪಕುಲಪತಿಯಾಗಿ ನಿವೃತ್ತರಾದರು.ಇವರು ಮೈಸೂರಿನ ಒಂಟಿಕೊಪ್ಪಲುವಿನಲ್ಲಿರುವ "ಉದಯರವಿ"ಯಲ್ಲಿ ವಾಸಿಸುತ್ತಿದ್ದರು. ಇವರ ಹೆಂಡತಿಯ ಹೆಸರು ಹೇಮಾವತಿ ಮತ್ತು ಇವರಿಗೆ ನಾಲ್ಕು ಜನ ಮಕ್ಕಳು(ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ, ತಾರಿಣಿ ಚಿದಾನಂದ).
ರಾಷ್ಟ್ರಕವಿ ಡಾ.ಕು.ವೆಂ.ಪು ಅವರ ಕುರಿತ ಮತ್ತೊಂದು ಲೇಖನಕ್ಕೆ ಇಲ್ಲಿ ಕ್ಲಿಕ್ ಮಾಡಿ http://kannadaratna.com/achievers/kuvempu.html
[ಬದಲಾಯಿಸಿ] ಸಂದೇಶ
ಓ ನನ್ನ ಚೇತನ, ಆಗು ನೀ ಅನಿಕೇತನ
[ಬದಲಾಯಿಸಿ] ವಿಶ್ವ ಮಾನವ ಸಂದೇಶ
ಪ್ರತಿಯೊಂದು ಮಗುವೂ ಹುಟ್ಟುತ್ತಲೆ -ವಿಶ್ವ ಮಾನವ. ಬೆಳೆಯುತ್ತಾ ನಾವು ಅದನ್ನು ದೇಶ, ಭಾಷೆ, ಮತ, ಜಾತಿ,ಜನಾಂಗ, ವರ್ಣ ಇತ್ಯಾದಿ ಉಪಾಧಿಗಳಿಂದ ಬದ್ಧನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ”’ವಿಶ್ವಮಾನವ”’ನನ್ನಾಗಿ ಮಾಡುವುದೆ ವಿದ್ಯೆ, ಸಂಸ್ಕೃತಿ, ನಾಗರಿಕತೆಯ ಕರ್ತವ್ಯವಾಗಬೇಕು ಈ ದರ್ಶನವನ್ನೆ ’ವಿಶ್ವಮಾನವ ಗೀತೆ’ ಸಾರುತ್ತದೆ
[ಬದಲಾಯಿಸಿ] ' ಸಾಹಿತ್ಯ
ಕುವೆಂಪುರವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಅಪಾರ. ಇವರು ಧಾರವಾಡದಲ್ಲಿ ನಡೆದ ೧೯೫೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ೧೯೫೫ ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದರು. ಇವರ ಶ್ರೀ ರಾಮಾಯಣ ದರ್ಶನಂ ಕೃತಿಯು ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿಯನ್ನು ದೊರಕಿಸಿ ಕೊಟ್ಟಿತು. ಭಾರತ ಸರ್ಕಾರದ ಪದ್ಮವಿಭೂಷಣದಿಂದಲೂ ಪುರಸ್ಕೃತಗೊಂಡ ಇವರು 'ಜೈ ಭಾರತ ಜನನಿಯ ತನುಜಾತೆ...' ಕನ್ನಡ ನಾಡ ಗೀತೆಯನ್ನು ರಚಿಸಿದ ಮೇರು ಕವಿ. ಇವರು ಬರೆದ 'ಸ್ವಾಮಿ ವಿವೇಕಾನಂದ'ರ ಬಗೆಗಿನ ಕೃತಿ ಬಹಳ ಜನಪ್ರಿಯವಾದದ್ದು.
ಇವರ ವಿಶ್ವಮಾನವ ಸಂದೇಶ ಅತಿ ಪ್ರಸಿದ್ಡವಾಗಿದೆ.
[ಬದಲಾಯಿಸಿ] ಶ್ರೀ ರಾಮಾಯಣ ದರ್ಶನಂ
ಕುವೆಂಪುರವರು ಬರೆದ ಈ ಕೃತಿಯು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತವಾಗಿದೆ. ಕನ್ನಡದ ಅತ್ಯಮೂಲ್ಯ ಗ್ರಂಥಗಳಲ್ಲಿ ಒಂದು, ಈ ಕೃತಿ. ಈ ಕೃತಿ ಕನ್ನಡದ ಮೊದಲ ಆಧುನಿಕ ಮಹಾಕಾವ್ಯ; ಸರಳರಗಳೆಯನ್ನು ಕನ್ನಡದಲ್ಲಿ ಮೊತ್ತಮೊದಲ ಬಾರಿಗೆ ಬಳಸಲಾಗಿದೆ.
[ಬದಲಾಯಿಸಿ] ಕೃತಿಗಳು
ಕಾದಂಬರಿ:
ಕಾನೂರು ಸುಬ್ಬಮ್ಮ ಹೆಗ್ಗಡತಿ (ಚಲನ ಚಿತ್ರವಾಗಿದೆ)
ಮಲೆಗಳಲ್ಲಿ ಮದುಮಗಳು (ಚಲನ ಚಿತ್ರವಾಗಿದೆ)
ನಾಟಕಗಳು:
ಬೆರಳ್ಗೆ ಕೊರಳ್
ಶೂದ್ರ ತಪಸ್ವಿ
ಸ್ಮಶಾನ ಕುರುಕ್ಷೇತ್ರ
ರಕ್ತಾಕ್ಷಿ
ಬಿರುಗಾಳಿ
ಯಮನ ಸೋಲು
ನನ್ನ ಗೋಪಾಲ (ಮಕ್ಕಳ ನಾಟಕ)
ವಾಲ್ಮೀಕಿಯ ಭಾಗ್ಯ
ಮಹಾರಾತ್ರಿ
ಜಲಗಾರ
ಚಂದ್ರಹಾಸ
ಬಲಿದಾನ
ಮೋಡಣ್ಣನ ತಮ್ಮ (ಮಕ್ಕಳ ನಾಟಕ)
ಚಿತ್ರ ಪ್ರಬಂಧ:
ಮಲೆನಾಡಿನ ಚಿತ್ರಗಳು
ವಿಚಾರ:
ವಿಚಾರ ಕ್ರಾಂತಿಗೆ ಆಹ್ವಾನ
ಆತ್ಮ ಚರಿತ್ರೆ:
ನೆನಪಿನ ದೋಣಿಯಲ್ಲಿ
ಕಾವ್ಯಗಳು:
ಶ್ರೀ ರಾಮಾಯಣ ದರ್ಶನ೦
ಕೊಳಲು
ಅಗ್ನಿಹಂಸ
ಅನಿಕೇತನ
ಅನುತ್ತರಾ
ಇಕ್ಶುಗಂಗೋತ್ರಿ
ಕದರಡಕೆ
ಕಥನ ಕವನಗಳು
ಕಲಾಸುಂದರಿ
ಕಿಂಕಿಣಿ
ಕೃತ್ತಿಕೆ
ಜೇನಾಗುವ
ನವಿಲು
ಪಕ್ಷಿಕಾಶಿ
ಚಿತ್ರಾಂಗದಾ
ಪ್ರೇತಕ್ಯು
ಪ್ರೇಮಕಾಶ್ಮೀರ
ಮಂತ್ರಾಕ್ಷತೆ
ಷೋಡಶಿ
ಹಾಳೂರು
ಕೋಗಿಲೆ
ಪಾಂಚಜನ್ಯ
ಕುಟೀಚಕ
ಕಥಾಸಂಕಲನ:
ನನ್ನ ದೇವರು ಮತ್ತು ಇತರ ಕಥೆಗಳು
ವಿಮರ್ಶೆ:
ದ್ರೌಪದಿಯ ಶ್ರೀಮುಡಿ
ಜೀವನ ಚರಿತ್ರೆ:
ಸ್ವಾಮಿ ವಿವೇಕಾನಂದ
ಶ್ರೀ ರಾಮಕೃಷ್ಣ ಪರಮಹಂಸ
[ಬದಲಾಯಿಸಿ] ಕುವೆಂಪುರವರ ಬಗ್ಗೆ ಇತರರು ಬರೆದ ಪುಸ್ತಕಗಳು
ಮಗಳು ಕಂಡ ಕುವೆಂಪು - ಲೇ: ತಾರಿಣಿ ಚಿದಾನಂದ ಪ್ರಕಾಶಕರು:ಪುಸ್ತಕ ಪ್ರಕಾಶನ
ಅಣ್ಣನ ನೆನಪು - ಲೇ: ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರಕಾಶಕರು:ಪುಸ್ತಕ ಪ್ರಕಾಶನ
ಯುಗದ ಕವಿ-ಲೇ: ಡಾ.ಕೆ.ಸಿ.ಶಿವಾರೆಡ್ಡಿ
ಹೀಗಿದ್ದರು ಕುವೆಂಪು - ಲೇ:ಪ್ರಭುಶಂಕರ
ಬೆರಳ್ಗೆಕೊರಳ್ ನಾಟಕವುಸಹಚಲನಚಿತ್ರವಾಗಿದೆ.
[ಬದಲಾಯಿಸಿ] ಪ್ರಶಸ್ತಿ ಪುರಸ್ಕಾರಗಳು
ಕುಪ್ಪಳಿಯಲ್ಲಿ ಕುವೆಂಪು ಮನೆ (ಈಗ ವಸ್ತು ಸಂಗ್ರಹಾಲಯವಾಗಿದೆ)ಜ್ಞಾನಪೀಠ ಪ್ರಶಸ್ತಿ (ಶ್ರೀ ರಾಮಾಯಣ ದರ್ಶನಂ) (೧೯೬೭)
ಪದ್ಮಭೂಷಣ (೧೯೫೮)
ಪದ್ಮವಿಭೂಷಣ (೧೯೮೯)
ಕರ್ನಾಟಕ ರತ್ನ (೧೯೯೨)
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (೧೯೫೫)
ಪಂಪ ಪ್ರಶಸ್ತಿ(೧೯೮೮)
ರಾಷ್ಟ್ರಕವಿ ಎಂದು ಬಿರುದು (೧೯೬೪)
[ಬದಲಾಯಿಸಿ] ಇತರೆ ಸಂಬಂಧಪಟ್ಟ ಪುಟಗಳು
ಕುವೆಂಪು ವಿಶ್ವವಿದ್ಯಾನಿಲಯ - ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ಎಂಬ ಊರಿನಲ್ಲಿ ಕುವೆಂಪು ಹೆಸರಿನ ವಿಶ್ವವಿದ್ಯಾನಿಲಯ ಸ್ಥಾಪನೆ.
ಪೂರ್ಣಚಂದ್ರ ತೇಜಸ್ವಿ - ಕುವೆಂಪುರವರ ಪುತ್ರ, ಸಾಹಿತಿ.
ಪರಿವಿಡಿ [ಅಡಗಿಸು]
೧ ಜೀವನ
೨ ಸಂದೇಶ
೩ ವಿಶ್ವ ಮಾನವ ಸಂದೇಶ
೪ ' ಸಾಹಿತ್ಯ
೫ ಶ್ರೀ ರಾಮಾಯಣ ದರ್ಶನಂ
೬ ಕೃತಿಗಳು
೬.೧ ಕುವೆಂಪುರವರ ಬಗ್ಗೆ ಇತರರು ಬರೆದ ಪುಸ್ತಕಗಳು
೭ ಪ್ರಶಸ್ತಿ ಪುರಸ್ಕಾರಗಳು
೮ ಇತರೆ ಸಂಬಂಧಪಟ್ಟ ಪುಟಗಳು
೯ ಹೊರಗಿನ ಸಂಪರ್ಕಗಳು
[ಬದಲಾಯಿಸಿ] ಜೀವನ
ಡಿಸೆಂಬರ್ ೨೯, ೧೯೦೪, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆಯಲ್ಲಿ ಜನಿಸಿದ ಇವರು, ಕುಪ್ಪಳ್ಳಿ (ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು) ಹಾಗೂ ಮೈಸೂರಿನಲ್ಲಿ ಬೆಳೆದರು. ಮೈಸೂರಿನ 'ಮಹಾರಾಜಾ' ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪಕುಲಪತಿಯಾಗಿ ನಿವೃತ್ತರಾದರು.ಇವರು ಮೈಸೂರಿನ ಒಂಟಿಕೊಪ್ಪಲುವಿನಲ್ಲಿರುವ "ಉದಯರವಿ"ಯಲ್ಲಿ ವಾಸಿಸುತ್ತಿದ್ದರು. ಇವರ ಹೆಂಡತಿಯ ಹೆಸರು ಹೇಮಾವತಿ ಮತ್ತು ಇವರಿಗೆ ನಾಲ್ಕು ಜನ ಮಕ್ಕಳು(ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ, ತಾರಿಣಿ ಚಿದಾನಂದ).
ರಾಷ್ಟ್ರಕವಿ ಡಾ.ಕು.ವೆಂ.ಪು ಅವರ ಕುರಿತ ಮತ್ತೊಂದು ಲೇಖನಕ್ಕೆ ಇಲ್ಲಿ ಕ್ಲಿಕ್ ಮಾಡಿ http://kannadaratna.com/achievers/kuvempu.html
[ಬದಲಾಯಿಸಿ] ಸಂದೇಶ
ಓ ನನ್ನ ಚೇತನ, ಆಗು ನೀ ಅನಿಕೇತನ
[ಬದಲಾಯಿಸಿ] ವಿಶ್ವ ಮಾನವ ಸಂದೇಶ
ಪ್ರತಿಯೊಂದು ಮಗುವೂ ಹುಟ್ಟುತ್ತಲೆ -ವಿಶ್ವ ಮಾನವ. ಬೆಳೆಯುತ್ತಾ ನಾವು ಅದನ್ನು ದೇಶ, ಭಾಷೆ, ಮತ, ಜಾತಿ,ಜನಾಂಗ, ವರ್ಣ ಇತ್ಯಾದಿ ಉಪಾಧಿಗಳಿಂದ ಬದ್ಧನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ”’ವಿಶ್ವಮಾನವ”’ನನ್ನಾಗಿ ಮಾಡುವುದೆ ವಿದ್ಯೆ, ಸಂಸ್ಕೃತಿ, ನಾಗರಿಕತೆಯ ಕರ್ತವ್ಯವಾಗಬೇಕು ಈ ದರ್ಶನವನ್ನೆ ’ವಿಶ್ವಮಾನವ ಗೀತೆ’ ಸಾರುತ್ತದೆ
[ಬದಲಾಯಿಸಿ] ' ಸಾಹಿತ್ಯ
ಕುವೆಂಪುರವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಅಪಾರ. ಇವರು ಧಾರವಾಡದಲ್ಲಿ ನಡೆದ ೧೯೫೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ೧೯೫೫ ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದರು. ಇವರ ಶ್ರೀ ರಾಮಾಯಣ ದರ್ಶನಂ ಕೃತಿಯು ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿಯನ್ನು ದೊರಕಿಸಿ ಕೊಟ್ಟಿತು. ಭಾರತ ಸರ್ಕಾರದ ಪದ್ಮವಿಭೂಷಣದಿಂದಲೂ ಪುರಸ್ಕೃತಗೊಂಡ ಇವರು 'ಜೈ ಭಾರತ ಜನನಿಯ ತನುಜಾತೆ...' ಕನ್ನಡ ನಾಡ ಗೀತೆಯನ್ನು ರಚಿಸಿದ ಮೇರು ಕವಿ. ಇವರು ಬರೆದ 'ಸ್ವಾಮಿ ವಿವೇಕಾನಂದ'ರ ಬಗೆಗಿನ ಕೃತಿ ಬಹಳ ಜನಪ್ರಿಯವಾದದ್ದು.
ಇವರ ವಿಶ್ವಮಾನವ ಸಂದೇಶ ಅತಿ ಪ್ರಸಿದ್ಡವಾಗಿದೆ.
[ಬದಲಾಯಿಸಿ] ಶ್ರೀ ರಾಮಾಯಣ ದರ್ಶನಂ
ಕುವೆಂಪುರವರು ಬರೆದ ಈ ಕೃತಿಯು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತವಾಗಿದೆ. ಕನ್ನಡದ ಅತ್ಯಮೂಲ್ಯ ಗ್ರಂಥಗಳಲ್ಲಿ ಒಂದು, ಈ ಕೃತಿ. ಈ ಕೃತಿ ಕನ್ನಡದ ಮೊದಲ ಆಧುನಿಕ ಮಹಾಕಾವ್ಯ; ಸರಳರಗಳೆಯನ್ನು ಕನ್ನಡದಲ್ಲಿ ಮೊತ್ತಮೊದಲ ಬಾರಿಗೆ ಬಳಸಲಾಗಿದೆ.
[ಬದಲಾಯಿಸಿ] ಕೃತಿಗಳು
ಕಾದಂಬರಿ:
ಕಾನೂರು ಸುಬ್ಬಮ್ಮ ಹೆಗ್ಗಡತಿ (ಚಲನ ಚಿತ್ರವಾಗಿದೆ)
ಮಲೆಗಳಲ್ಲಿ ಮದುಮಗಳು (ಚಲನ ಚಿತ್ರವಾಗಿದೆ)
ನಾಟಕಗಳು:
ಬೆರಳ್ಗೆ ಕೊರಳ್
ಶೂದ್ರ ತಪಸ್ವಿ
ಸ್ಮಶಾನ ಕುರುಕ್ಷೇತ್ರ
ರಕ್ತಾಕ್ಷಿ
ಬಿರುಗಾಳಿ
ಯಮನ ಸೋಲು
ನನ್ನ ಗೋಪಾಲ (ಮಕ್ಕಳ ನಾಟಕ)
ವಾಲ್ಮೀಕಿಯ ಭಾಗ್ಯ
ಮಹಾರಾತ್ರಿ
ಜಲಗಾರ
ಚಂದ್ರಹಾಸ
ಬಲಿದಾನ
ಮೋಡಣ್ಣನ ತಮ್ಮ (ಮಕ್ಕಳ ನಾಟಕ)
ಚಿತ್ರ ಪ್ರಬಂಧ:
ಮಲೆನಾಡಿನ ಚಿತ್ರಗಳು
ವಿಚಾರ:
ವಿಚಾರ ಕ್ರಾಂತಿಗೆ ಆಹ್ವಾನ
ಆತ್ಮ ಚರಿತ್ರೆ:
ನೆನಪಿನ ದೋಣಿಯಲ್ಲಿ
ಕಾವ್ಯಗಳು:
ಶ್ರೀ ರಾಮಾಯಣ ದರ್ಶನ೦
ಕೊಳಲು
ಅಗ್ನಿಹಂಸ
ಅನಿಕೇತನ
ಅನುತ್ತರಾ
ಇಕ್ಶುಗಂಗೋತ್ರಿ
ಕದರಡಕೆ
ಕಥನ ಕವನಗಳು
ಕಲಾಸುಂದರಿ
ಕಿಂಕಿಣಿ
ಕೃತ್ತಿಕೆ
ಜೇನಾಗುವ
ನವಿಲು
ಪಕ್ಷಿಕಾಶಿ
ಚಿತ್ರಾಂಗದಾ
ಪ್ರೇತಕ್ಯು
ಪ್ರೇಮಕಾಶ್ಮೀರ
ಮಂತ್ರಾಕ್ಷತೆ
ಷೋಡಶಿ
ಹಾಳೂರು
ಕೋಗಿಲೆ
ಪಾಂಚಜನ್ಯ
ಕುಟೀಚಕ
ಕಥಾಸಂಕಲನ:
ನನ್ನ ದೇವರು ಮತ್ತು ಇತರ ಕಥೆಗಳು
ವಿಮರ್ಶೆ:
ದ್ರೌಪದಿಯ ಶ್ರೀಮುಡಿ
ಜೀವನ ಚರಿತ್ರೆ:
ಸ್ವಾಮಿ ವಿವೇಕಾನಂದ
ಶ್ರೀ ರಾಮಕೃಷ್ಣ ಪರಮಹಂಸ
[ಬದಲಾಯಿಸಿ] ಕುವೆಂಪುರವರ ಬಗ್ಗೆ ಇತರರು ಬರೆದ ಪುಸ್ತಕಗಳು
ಮಗಳು ಕಂಡ ಕುವೆಂಪು - ಲೇ: ತಾರಿಣಿ ಚಿದಾನಂದ ಪ್ರಕಾಶಕರು:ಪುಸ್ತಕ ಪ್ರಕಾಶನ
ಅಣ್ಣನ ನೆನಪು - ಲೇ: ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರಕಾಶಕರು:ಪುಸ್ತಕ ಪ್ರಕಾಶನ
ಯುಗದ ಕವಿ-ಲೇ: ಡಾ.ಕೆ.ಸಿ.ಶಿವಾರೆಡ್ಡಿ
ಹೀಗಿದ್ದರು ಕುವೆಂಪು - ಲೇ:ಪ್ರಭುಶಂಕರ
ಬೆರಳ್ಗೆಕೊರಳ್ ನಾಟಕವುಸಹಚಲನಚಿತ್ರವಾಗಿದೆ.
[ಬದಲಾಯಿಸಿ] ಪ್ರಶಸ್ತಿ ಪುರಸ್ಕಾರಗಳು
ಕುಪ್ಪಳಿಯಲ್ಲಿ ಕುವೆಂಪು ಮನೆ (ಈಗ ವಸ್ತು ಸಂಗ್ರಹಾಲಯವಾಗಿದೆ)ಜ್ಞಾನಪೀಠ ಪ್ರಶಸ್ತಿ (ಶ್ರೀ ರಾಮಾಯಣ ದರ್ಶನಂ) (೧೯೬೭)
ಪದ್ಮಭೂಷಣ (೧೯೫೮)
ಪದ್ಮವಿಭೂಷಣ (೧೯೮೯)
ಕರ್ನಾಟಕ ರತ್ನ (೧೯೯೨)
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (೧೯೫೫)
ಪಂಪ ಪ್ರಶಸ್ತಿ(೧೯೮೮)
ರಾಷ್ಟ್ರಕವಿ ಎಂದು ಬಿರುದು (೧೯೬೪)
[ಬದಲಾಯಿಸಿ] ಇತರೆ ಸಂಬಂಧಪಟ್ಟ ಪುಟಗಳು
ಕುವೆಂಪು ವಿಶ್ವವಿದ್ಯಾನಿಲಯ - ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ಎಂಬ ಊರಿನಲ್ಲಿ ಕುವೆಂಪು ಹೆಸರಿನ ವಿಶ್ವವಿದ್ಯಾನಿಲಯ ಸ್ಥಾಪನೆ.
ಪೂರ್ಣಚಂದ್ರ ತೇಜಸ್ವಿ - ಕುವೆಂಪುರವರ ಪುತ್ರ, ಸಾಹಿತಿ.
Subscribe to:
Posts (Atom)